15 October, 2012

ಇಲ್ಲಸ್ಟ್ರೇಷನ್



                                                    "..ದೂರ ದೂರದವರೆಗೆ ಹಬ್ಬಿ ನಿಂತ
                                                        ತೋಟಗಳು, ನಡುಬಾಗಿಸಿದ ರೈತರು.
                                                       ಹೀಗೆ ಹೂಜಿ ಒಂದು ಬಲಿಷ್ಠ ರಾಷ್ಟ್ರ.

                                                       ಒಮ್ಮೊಮ್ಮೆ ಅದರ ಖಾಲಿತನ ತುಂಬಲಿಕ್ಕೆ
                                                       ತಯಾರಿ ನಡೆಯುತ್ತೆ. ಅದು
                                                       ರಾಜನ ಅಧಿಕಾರಕ್ಕೆ
                                                       ಸೂಳೆಯ ಮೊಲೆತುರಿತಕ್ಕೆ
                                                       ವಿದೂಷಕನ ವ್ಯಂಗ್ಯಕ್ಕೆ.."     

                                                                    -ರವಿ ದ್ರಾವಿಡ (ಒಂದು ಹೂಜಿ ಮತ್ತು ಕವಣೆ ಏಟು)





* ಇದು ರವಿ ದ್ರಾವಿಡರ  'ಒಂದು ಹೂಜಿ ಮತ್ತು ಕವಣೆ ಏಟು' ಕವಿತೆಗೆ ಬಿಡಿಸಿದ ಇಲ್ಲಸ್ಟ್ರೇಷನ್, ಮೇಲಿನವು ಇದೇ ಕವಿತೆಯಿಂದ ಆಯ್ದ ಸಾಲುಗಳು.

Play Time


02 October, 2012

ಬೇರು-ಬಿಳಲು




ನಮ್ಮಲ್ಲಿ ಹಲವರು ಹೊಟ್ಟೆಪಾಡಿಗೋ ಅನಿವಾರ್ಯಕ್ಕೋ ಕಟ್ಟುಬಿದ್ದು ನಮ್ಮ ಮೂಲವನ್ನು ಬಿಟ್ಟು ಬಂದವರು,ನಾವು ಮೂಲದೆಡೆಗೆ ತುಡಿಯುತ್ತಲೇ ಇಲ್ಲಿನ ನಗರೀಕರಣ ವ್ಯವಸ್ಥೆಗೆಯಾಂತ್ರಿಕತೆಯ,ಜಾಗತೀಕರಣಉದಾರೀಕರಣ,ಬಂಡವಾಳಶಾಹಿತ್ವದ ಅನಿವಾರ್ಯಕ್ಕೆ ಒಗ್ಗಿಕೊಳ್ಳುತ್ತ ದಿನೇದಿನೇ ನಮ್ಮ ನೈಜತೆಯನ್ನ ಕಳೆದುಕೊಳ್ಳುತ್ತಿದ್ದೇವೆ, ಸಮಯವೋ ಮೇಲಧಿಕಾರಿಯೋ ಯಾವುದೋ ಕಾಣದ ಕೈ ನಮಗೂ ತಿಳಿಯದಂತೆ ನಮ್ಮನ್ನು ನಿಯಂತ್ರಿಸುತ್ತಿದೆ, ಎಲ್ಲಿಯವರೆಗೆಂದರೆ ನಿಯಂತ್ರಣವಿಲ್ಲದೇ ಅಸ್ತಿತ್ವವಿಲ್ಲವೆಂಬಂತೆ. ಕೊನೆಕೊನೆಗೆ ಬಣ್ಣವಿಲ್ಲದ ಒಂದು ಪೀಳಿಗೆ ನಮ್ಮದಾಗುತ್ತ ನಡೆದಿದೆ, ಬೇರೂ ಇಲ್ಲ ಬಿಳುಲೂ ಇಲ್ಲ. ಇಂತದ್ದೇ ಪರಿಸರವೂ ಸುತ್ತ ಬೆಳೆಯುತ್ತ ಬಂದಂತೆ ಬೇರಿನ ಹಂಗಿಲ್ಲದ ಯಾಂತ್ರಿಕತೆಯೇ ಪ್ರಿಯವಾಗುತ್ತ ನಮ್ಮನ್ನು ನಾವು ನಿರ್ವಾತದಲ್ಲಿ ಬಂದಿಸಿಕೊಳ್ಳುತ್ತ ಸಾಗಿದ್ದೇವೆ,ನಿಧಿಯಂತೆ ಅವುಚಿಕೊಂಡು ತಂದಿದ್ದ ಕನಸುಗಳು ನಮ್ಮ ಪರಿವೆಯೇ ಇಲ್ಲದೇ ಬಣ್ಣಕಳೆದುಕೊಂಡ ಗೊಂಬೆಗಳಾಗುತ್ತಿವೆ.ಸತ್ವಹೀನತೆಯೊಳಗೆ ಕುಳಿತು ನಮ್ಮ ಒಳತುಡಿತವನ್ನು ಗ್ರಹಿಸುವ ಸೂಕ್ಷ್ಮತೆಯನ್ನ ಕಳೆದುಕೊಳ್ಳುತ್ತ  ನಾವೇ ನಮ್ಮನ್ನು ಸ್ಪಂದಿಸದಷ್ಟು ಘನೀಭವಿಸುವ ಪ್ರಕ್ರಿಯೆಗೆ ಒಡ್ಡಿಕೊಳ್ಳುತ್ತ ನಡೆದಿದ್ದೇವೆ.

ಇದು 'ಮುಗುಳು' ಪತ್ರಿಕೆಗೆ ಮಾಡಿದ ಚಿತ್ರ, ಈ ಸಲದ ಮುಗುಳು ಒಳ್ಳೊಳ್ಳೇ ಲೇಖನಗಳಿಂದ ಕೂಡಿದೆ. ಈ ಇ ಪೇಪರ್ ವರ್ಶನ್‌ನ‌ಲಿಂಕಿನಲ್ಲಿ ಬಿಡುವಾದಾಗ ನೀವೂ ಮುಗುಳು ಓದಬಹುದು, ಡೌನ್‌ಲೋಡ್ ಕೂಡ ಮಾಡಿಟ್ಟುಕೊಳ್ಳಬಹುದು.